ಮರುದಿನ ಬೆಳಿಗ್ಗೆ 5.30ರ ನಸುಕಿನ ವೇಳೆಯಲ್ಲಿ ಶಾರದಮ್ಮ, ಶೀಲಮ್ಮ ಮನೆಯಲ್ಲಿ ಮಲಗಿದ್ದಾಗ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಮನೆಯ ತೆಂಗಿನ ನೆರಿಕೆಗೆ ಬೆಂಕಿ ಹಚ್ಚಿದ್ದಾನೆ. ಮನೆಯ ಗೋಡೆ ಸಂಪೂರ್ಣ ಸುಟ್ಟು ಹೋಗಿ, ಹೆಂಚುಗಳೆಲ್ಲ ಕೆಳಗೆ ಬಿದ್ದಿವೆ. ಸುಮಾರು ₹10,000 ಮೌಲ್ಯದ ಅಕ್ಕಿ, ಬೇಳೆ, ಜೋಳ, ಬಟ್ಟೆ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಸಂಬಂಧ ಹಲವಾಗಿಲು ಪೊಲೀಸರು ಐಪಿಸಿ ಕಲಂ 323, 307, 427, 436, 504 ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿದಾರರ ವಿಚಾರಣೆ ನಡೆಸಿ, ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿದೆ.