ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ತುಂಗಭದ್ರಾ ಕಾಲುವೆಗೆ ಆಟೊ ಪಲ್ಟಿಯಾಗಿ ಮೂವರು ಸಾವು, ಮೂವರಿಗೆ ಹುಡುಕಾಟ

Last Updated 14 ಸೆಪ್ಟೆಂಬರ್ 2022, 6:19 IST
ಅಕ್ಷರ ಗಾತ್ರ

ಬಳ್ಳಾರಿ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೊವೊಂದು ಎಚ್‌ಎಲ್‌ಸಿ ಕಾಲುವೆಗೆಪಲ್ಟಿಯಾಗಿ ಮೂವರು ಮೃತಪಟ್ಟಿರುವಘಟನೆಕೊಳಗಲ್ಲು ಗ್ರಾಮದ ಬಳಿ ಬುಧವಾರ ನಡೆದಿದೆ.

ಒಟ್ಟು 11 ಜನರು ಆಟೊದಲ್ಲಿ ಪ್ರಯಾಣಿಸುತ್ತಿದ್ದರು. ಐದುಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೂರು ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದ್ದು,ಉಳಿದವರಿಗಾಗಿಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೃತರನ್ನು ಲಿಂಗಮ್ಮ (35), ದುರ್ಗಿ (35), ಪುಷ್ಪಾವತಿ(16) ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಆಟೊದಲ್ಲಿ ಪ್ರಯಾಣಿಸುತ್ತಿದ್ದವರು ಕೊಳಗಲ್ಲು ಗ್ರಾಮದವರು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT