‘ಆಟೊ ರಿಕ್ಷಾ ಚಾಲಕರಿಗೆ ನಗರಸಭೆ ಎಸ್ಸಿ/ಎಸ್ಟಿ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪ್ರಧಾನಮಂತ್ರಿ ರೋಜಗಾರ್ ಯೋಜನೆ, ಮುದ್ರಾ ಯೋಜನೆ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಸುಪ್ರೀಂಕೋರ್ಟ್ ಆದೇಶದಂತೆ 7,500 ಕೆ.ಜಿ. ತೂಕದ ವಾಹನಗಳಿಗೆ ಪರವಾನಗಿ ಬ್ಯಾಡ್ಜ್ ಕಡ್ಡಾಯ ಇರುವುದಿಲ್ಲ. ಇದು ರಾಜ್ಯದಲ್ಲಿ ಪಾಲನೆ ಆಗಬೇಕು’ ಎಂದು ಒತ್ತಾಯಿಸಿದರು.