ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಉಸ್ತುವಾರಿ ಸಿಕ್ಕರೆ ಖುಷಿ: ಶ್ರೀರಾಮುಲು

Last Updated 21 ಆಗಸ್ಟ್ 2021, 11:36 IST
ಅಕ್ಷರ ಗಾತ್ರ

ಬಳ್ಳಾರಿ: ‘ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕರೆ ಸಂತೋಷ’ ಎಂದು ಸಚಿವ ಶ್ರೀರಾಮುಲು ಮನದಾಸೆ ಬಹಿರಂಗಪಡಿಸಿದರು.

‘ಬಳ್ಳಾರಿ ನನ್ನ ಜನ್ಮಭೂಮಿ; ಉಳಿದ ಜಿಲ್ಲೆಗಳು ಕರ್ಮಭೂಮಿ. ಜನ್ಮಭೂಮಿ ಹೊಣೆ ಸಿಕ್ಕರೆ ಯಾರಿಗೆ ತಾನೆ ಸಂತೋಷ ಆಗುವುದಿಲ್ಲ’ ಎಂದರು.

‘ಕಾಂಗ್ರೆಸ್‌ ಒಡೆದ ಮನೆ. ಅಲ್ಲಿ ಗುಂಪುಗಾರಿಕೆ ಇದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ದೆಹಲಿಗೆ ಹೋದಾಗ ಮಾತ್ರ ಒಂದಾಗ್ತರೆ’ ಎಂದು ಸಚಿವರು ಲೇವಡಿ ಮಾಡಿದರು.

ಈ ನಡುವೆ, ಬಳ್ಳಾರಿಯಿಂದ ವಿಜಯನಗರವನ್ನು ಬೇರ್ಪಡಿಸಲು ಕಾರಣಕರ್ತರಾದ ಆನಂದ್‌ಸಿಂಗ್‌ ಅವರಿಗೇ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಕೊಟ್ಟಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಸೋಮಶೇಖರ ರೆಡ್ಡಿ, ತಕ್ಷಣ ಅವರನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT