ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆ

Last Updated 15 ಮೇ 2018, 4:51 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ.

ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಭಾರಿ ಅಂತರದಿಂದ ಹಿಂದೆ ಬಿದ್ದಿದ್ದಾರೆ. ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರು 11,486 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಅವರು 23,052 ಮತ ಪಡೆದಿದ್ದರೆ, ಸಿದ್ದರಾಮಯ್ಯ 11,566 ಮತ ಗಳಿಸಿದ್ದಾರೆ.

ಮಹದೇವಪ್ಪಗೆ ಭಾರಿ ಹಿನ್ನಡೆ: ತಿ.ನರಸೀಪುರ ಕ್ಷೇತ್ರದಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಜೆಡಿಎಸ್‌ನ ಎಂ.ಅಶ್ವಿನ್ ಕುಮಾರ್‌ 14,141 ಮತಗಳಿಂದ ಮುಂದಿದ್ದಾರೆ. ಅವರು 21,088ಮತ ಪಡೆದಿದ್ದರೆ, ಮಹದೇವಪ್ಪ ಕೇವಲ 6,947 ಮತ ಪಡೆದಿದ್ದಾರೆ.

ಚಾಮರಾಜ, ಪಿರಿಯಾಪಟ್ಟಣ, ಹುಣಸೂರು, ಕೃಷ್ಣರಾಜ, ನಂಜನಗೂಡಿನಲ್ಲಿ ಕಾಂಗ್ರೆಸ್‌ ಹಿನ್ನಡೆ ಕಂಡಿದೆ. ವರುಣಾದಲ್ಲಿ ಡಾ.ಯತೀಂದ್ರ, ಎಚ್‌.ಡಿ.ಕೋಟೆಯಲ್ಲಿ ಅನಿಲ್ ಚಿಕ್ಕಮಾದು ಹಾಗೂ ನರಸಿಂಹರಾಜ ಕ್ಷೇತ್ರದಲ್ಲಿ ತನ್ವೀರ್‌ ಸೇಠ್‌ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT