ಚುನಾವಣೆಗೂ ಮುನ್ನ ಹಾಗೂ ಚುನಾವಣೆಯಲ್ಲಿ ಗೆದ್ದ ನಂತರ ಹಲವು ಸಭೆಗಳಲ್ಲಿ ಸ್ವತಃ ದೇವೇಂದ್ರಪ್ಪನವರು ಹೊಸಪೇಟೆಯಲ್ಲಿ ಸಂಸದರ ಕಚೇರಿ ಆರಂಭಿಸುವ ಭರವಸೆ ನೀಡಿದ್ದರು. ಅವಿಭಜಿತ ಬಳ್ಳಾರಿ ಜಿಲ್ಲೆ ಭೌಗೋಳಿಕವಾಗಿ ವಿಶಾಲ ಆಗಿರುವುದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಜಿಲ್ಲಾ ಕೇಂದ್ರದ ಜೊತೆಯಲ್ಲಿ ಹೊಸಪೇಟೆಯಲ್ಲೂ ಸಂಸದರ ಕಚೇರಿ ಆರಂಭಿಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಪರಿಹಾರ ಕಲ್ಪಿಸಲು ಯೋಜಿಸಲಾಗಿತ್ತು. ಆದರೆ, ಅದು ಇನ್ನೂ ಕಾರ್ಯಾರೂಪಕ್ಕೆ ಬಂದಿಲ್ಲ.