<p><strong>ಬಳ್ಳಾರಿ</strong>: ರಸ್ತೆ ವಿಸ್ತರಣೆ ಸಲುವಾಗಿ ನಗರದ ತಾಳೂರು ರಸ್ತೆಯಲ್ಲಿರುವ ಸರ್ಕಾರಿ ಶಾಲೆಯ ಕಾಂಪೌಂಡ್ ಅನ್ನು ಶನಿವಾರ ಕೆಡವುತ್ತಿದ್ದ ಸಂದರ್ಭದಲ್ಲಿ ಗೋಡೆ ಕುಸಿದು ಸಮೀಪದ ಮಹಾನಂದಿಕೊಟ್ಟಂ ನಿವಾಸಿ ಗೋವಿಂದಪ್ಪ (50) ಸ್ಥಳದಲ್ಲೇ ಮೃತಪಟ್ಟರು.</p>.<p>ಸುಮಾರು 10 ಅಡಿ ಎತ್ತರದ ಕಾಂಪೌಂಡ್ ಗೋಡೆಯ ಒಂದು ತುದಿಯನ್ನು ಬೆಳಿಗ್ಗೆ 7.30ರ ವೇಳೆಯಲ್ಲಿ ಯಂತ್ರವಾಹನದಿಂದ ಕೆಡವುತ್ತಿದ್ದಾಗ ಗೋಡೆಯ ಇನ್ನೊಂದು ತುದಿಯಲ್ಲಿ ಎಂದಿನಂತೆ ಗೋವಿಂದಪ್ಪ ಕುಳಿತಿದ್ದಾಗ ಗೋಡೆ ಏಕಾಏಕಿ ಉರುಳಿಬಿತ್ತು. ಅವರೊಂದಿಗೇ ಕುಳಿತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದರು.</p>.<p>ಮೃತರ ಪತ್ನಿ ಹನುಮಂತಮ್ಮ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಹಾಗೂ ಸಂಬಂಧಿಕರ ರೋದನ ಮನಕರಗುವಂತಿತ್ತು. ಘಟನೆಯಿಂದ ತಾಳೂರು ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಯಂತ್ರ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ರಸ್ತೆ ವಿಸ್ತರಣೆ ಸಲುವಾಗಿ ನಗರದ ತಾಳೂರು ರಸ್ತೆಯಲ್ಲಿರುವ ಸರ್ಕಾರಿ ಶಾಲೆಯ ಕಾಂಪೌಂಡ್ ಅನ್ನು ಶನಿವಾರ ಕೆಡವುತ್ತಿದ್ದ ಸಂದರ್ಭದಲ್ಲಿ ಗೋಡೆ ಕುಸಿದು ಸಮೀಪದ ಮಹಾನಂದಿಕೊಟ್ಟಂ ನಿವಾಸಿ ಗೋವಿಂದಪ್ಪ (50) ಸ್ಥಳದಲ್ಲೇ ಮೃತಪಟ್ಟರು.</p>.<p>ಸುಮಾರು 10 ಅಡಿ ಎತ್ತರದ ಕಾಂಪೌಂಡ್ ಗೋಡೆಯ ಒಂದು ತುದಿಯನ್ನು ಬೆಳಿಗ್ಗೆ 7.30ರ ವೇಳೆಯಲ್ಲಿ ಯಂತ್ರವಾಹನದಿಂದ ಕೆಡವುತ್ತಿದ್ದಾಗ ಗೋಡೆಯ ಇನ್ನೊಂದು ತುದಿಯಲ್ಲಿ ಎಂದಿನಂತೆ ಗೋವಿಂದಪ್ಪ ಕುಳಿತಿದ್ದಾಗ ಗೋಡೆ ಏಕಾಏಕಿ ಉರುಳಿಬಿತ್ತು. ಅವರೊಂದಿಗೇ ಕುಳಿತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದರು.</p>.<p>ಮೃತರ ಪತ್ನಿ ಹನುಮಂತಮ್ಮ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಹಾಗೂ ಸಂಬಂಧಿಕರ ರೋದನ ಮನಕರಗುವಂತಿತ್ತು. ಘಟನೆಯಿಂದ ತಾಳೂರು ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<p>ಯಂತ್ರ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>