ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ; ವಿನೋದ ಕರಣಂ ನಾಮಪತ್ರ ಸಲ್ಲಿಕೆ

Last Updated 31 ಮಾರ್ಚ್ 2021, 8:59 IST
ಅಕ್ಷರ ಗಾತ್ರ

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ‌ ಅಧ್ಯಕ್ಷ ಸ್ಥಾನಕ್ಕೆ ಮೊಟ್ಟ ಮೊದಲ ಮಹಿಳಾ ಅಭ್ಯರ್ಥಿಯಾಗಿ ವಿನೋದ ಕರಣಂ ಅವರು ತಾಲೂಕು ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು.

ನಂತರ ಮಾತನಾಡಿ, ' ಪರಿಷತ್ತಿನ ಪ್ರತಿಯೊಬ್ಬ ಸದಸ್ಯರೂ ಮತ ನೀಡಿ ಬಹುಮತದಿಂದ ಗೆಲ್ಲುಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

'80 ವರ್ಷಗಳಿಂದ ಒಬ್ಬ ಮಹಿಳೆಗೂ ಅಧ್ಯಕ್ಷರಾಗಲು ಅವಕಾಶ ದೊರಕಿಲ್ಲ, ಈಗ ಮೊದಲ ಬಾರಿಗೆ ಮಹಿಳೆಯರಿಗೆ ಕನ್ನಡ ಮಾತೆಯ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು' ಎಂದು ಮನವಿ ಮಾಡಿದರು.

ಶ್ರೀ ಕನಕ ದುರಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ತಾಲೂಕು ಕಚೇರಿಗೆ ಬಂದ ಅವರು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗರೆಡ್ಡಿ ರವರಿಗೆ ನಾಮ ಪತ್ರ ಸಲ್ಲಿಸಿದರು.

ಸಿಎಂ.ಗಂಗಾಧರಯ್ಯ, ಸುಮಾರೆಡ್ಡಿ, ಪದ್ಮಾವತಿ, ಶೈಲಾ ಸುರೇಶ್, ಅಲುವೇಲು, ಕಮಲ ಬಸವರಾಜ್, ಭಾಗ್ಯಲಕ್ಷ್ಮಿ, ವಿದ್ಯಾ ರಾಮಚಂದ್ರ ರಾವ್, ಸಿಎಂ.ಪೂರ್ಣಿಮಾ, ವಿ.ಬಾಬು, ಬಸವರಾಜ್ ಬಳೆ, ರಾಮಪ್ರಸಾದ್, ವೈದ್ಯನಾಥ, ವಿರುಪಾಕ್ಷಯ್ಯ ಹಿರೇಮಠ, ಕೆ.ವೀರಭದ್ರಗೌಡ, ಜಿಎಸ್.ಮೃತ್ಯುಂಜಯ್ಯ, ಡಾ.ಅರುಣಾ ಕಾಮನೇನಿ, ರಾಮಚಂದ್ರ ರಾವ್ ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT