ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಬಳ್ಳಾರಿ ಪಾಲಿಕೆ ಸದಸ್ಯರ ಆಗ್ರಹ

Last Updated 3 ಆಗಸ್ಟ್ 2021, 7:55 IST
ಅಕ್ಷರ ಗಾತ್ರ

ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಶಾಸಕ ಸೋಮಶೇಖರ ರೆಡ್ಡಿಗೆ ಸಚಿವ ಸ್ಥಾನ ನೀಡಿ ಇದರ ಜತೆ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರು ಆಗ್ರಹಿಸಿದ್ದಾರೆ.

ಬಳ್ಳಾರಿ ಜಿಲ್ಲೆ ವಿಭಜನೆಯಾಗಿದೆ. ಐದು ತಾಲೂಕು ಉಳಿದಿದ್ದು, ಇವುಗಳಲ್ಲಿ ಮೂರು ಕಾಂಗ್ರೆಸ್, ಉಳಿದ ಎರಡು ಮಾತ್ರ ಬಿಜೆಪಿ ಅಧಿಕಾರಕ್ಕಿದೆ. ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಮುಂದಿನ ಚುನಾವಣೆಯಲ್ಲಿ ಐದು ಸ್ಥಾನಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಬಿಜೆಪಿಯನ್ನು ಬಲಪಡಿಸಲು ಶಕ್ತಿ ಬಂದಂತೆ ಆಗುತ್ತದೆ.‌ ಅಲ್ಲದೇ, ಚಿಕ್ಕ ಜಿಲ್ಲೆ ಆಗಿರೋದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ. ಹೀಗಾಗಿ ಶಾಸಕರಾದ ಶ್ರೀರಾಮುಲು, ಜಿ.ಸೋಮಶೇಖರರೆಡ್ಡಿಗೆ ಸಚಿವಸ್ಥಾನ ನೀಡಬೇಕೆಂದು ಸದಸ್ಯರಾದ ಹನುಮಂತ, ಶ್ರೀನಿವಾಸ ಮೋತ್ಕರ ಮಾಧ್ಯಮಗೋಷ್ಠಿಯಲ್ಲಿಂದು ಒತ್ತಾಯಿಸಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ, ಗೋವಿಂದ, ಸುರೇಂದ್ರ, ಕಲ್ಪನ, ಕೆ.ಎಸ್.ಅಶೋಕ, ವೇಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT