ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಹೋರಾಟಕ್ಕೆ ಸಿ.ಎಂ. ನಿರ್ಲಕ್ಷ್ಯ ಸಲ್ಲ: ಜಯಮೃತ್ಯುಂಜಯ ಸ್ವಾಮೀಜಿ

Last Updated 22 ಜನವರಿ 2021, 12:01 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು)/ಹಗರಿಬೊಮ್ಮನಹಳ್ಳಿ: ‘2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದವರು ನಡೆಸುತ್ತಿರುವ ಹೋರಾಟವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಸ್ಪಂದನೆ ತೋರದೆ ನಿರ್ಲಕ್ಷ್ಯ ವಹಿಸುತ್ತಿರುವುದು ಸಲ್ಲದು. ಇದೇ ಧೋರಣೆ ತೋರಿದರೆ ಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಕೂಡಲಸಂಗಮದಿಂದ ಆರಂಭಗೊಂಡಿರುವ ಪಾದಯಾತ್ರೆ ಶುಕ್ರವಾರ ತಾಲ್ಲೂಕಿನ ಮರಿಯಮ್ಮನಹಳ್ಳಿ ಗಡಿ ದಾಟಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಂಕಸಮುದ್ರ ಪ್ರವೇಶಿಸಿತು. ಒಂಬತ್ತು ದಿನಗಳಲ್ಲಿ ಒಟ್ಟು 230 ಕಿ.ಮೀ. ಪಾದಯಾತ್ರೆ ಪೂರೈಸಿದೆ.

‘ಮುಖ್ಯಮಂತ್ರಿಗಳು ಹಿಂದುಳಿದ ವರ್ಗದಿಂದ ಮಾಹಿತಿಯನ್ನು ತರಿಸಿಕೊಂಡು, ಕೂಡಲೇ 2ಎ ಮೀಸಲಾತಿ ಕೊಡಬೇಕು. ಇಲ್ಲವಾದಲ್ಲಿ ಹರಿಹರದಲ್ಲಿ ಜ. 28ರಂದು ನಡೆಯಲಿರುವ ಸಮಾವೇಶದಲ್ಲಿ ಕಠೋರ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಇನ್ನು ಮರಿಯಮ್ಮನಹಳ್ಳಿಯಲ್ಲಿ ಮಾತನಾಡಿದ ಶಾಸಕ ಎಲ್‌.ಬಿ.ಪಿ. ಭೀಮಾ ನಾಯ್ಕ, ‘ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಒಂದುವೇಳೆ ಎಲ್ಲ ಪಂಚಮಸಾಲಿ ಸಮಾಜದ ಶಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜೀನಾಮೆ ಕೊಟ್ಟರೆ ನಾನು ಅವರ ಹಾದಿ ತುಳಿಯಲು ಸಿದ್ಧನಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT