ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಮಲಿಂಗಾರೆಡ್ಡಿ ಅವರಂತೆ ನಾನೂ ಏಳು ಸಲ ಶಾಸಕನಾಗಿದ್ದೇನೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಮೂರು ವರ್ಷಗಳ ಬಳಿಕ ನನ್ನನ್ನು ಮಂತ್ರಿ ಮಾಡಿದ್ದರು. ಅಲ್ಲಿಯವರೆಗೆ ತಾಳ್ಮೆಯಿಂದ ಇದ್ದೆ. ಸಚಿವನಾಗಲಿಲ್ಲ ಎಂದು ಪಕ್ಷ ಬಿಡುವ ಮಾತುಗಳನ್ನು ಆಡಿರಲಿಲ್ಲ’ ಎಂದು ಪ್ರತಿಕ್ರಿಯಿಸಿದರು.