ರಾಜೇಶ್ವರಿ ಅವರು ಮೂಲತಃ ಜಿಲ್ಲೆಯ ಗಡಿಭಾಗದ, ಆಂಧ್ರ ಪ್ರದೇಶದ ರಾಯದುರ್ಗಕ್ಕೆ ಸೇರಿದವರಾಗಿದ್ದರು. ಜಿಲ್ಲೆಯ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯದಲ್ಲಿ ಅವರದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದರು. ಹೀಗಾಗಿಯೇ ಚುನಾವಣೆಯಲ್ಲಿ ಅವರು ಘಟಾನುಘಟಿಗಳನ್ನು ಸೋಲಿಸಲು ಸಾಧ್ಯವಾಗಿತ್ತು.