ಬಳ್ಳಾರಿ: ನಗರದ ಎಸ್.ಎನ್.ಪೇಟೆಯ ಸರಳಾದೇವಿ ಕಾಲೇಜು ಎದುರಿನ ರಸ್ತೆ ಬದಿಯ ಚರಂಡಿಯಲ್ಲಿ ಗುರುವಾರ ಬೆಳಿಗ್ಗೆ ಪುರುಷನ ಶವ ಪತ್ತೆಯಾಗಿದೆ.
ಬೆಳಿಗ್ಗೆ ರಸ್ತೆಯಲ್ಲಿ ಪೌರಕಾರ್ಮಿಕರು ಸ್ವಚ್ಛತೆಗೆಂದು ಬಂದಾಗ ವಿಷಯ ಬೆಳಕಿಗೆ ಬಂದಿದೆ. ಶವ ಚರಂಡಿಯ ಒಳಗಡೆ ಸಿಕ್ಕಿದ್ದು, ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ಇನ್ನೂ ಮೃತನ ಗುರುತು ಪತ್ತೆಯಾಗಿಲ್ಲ. ಕೊಲೆ ಮಾಡಿ ಚರಂಡಿ ಒಳಗಡೆ ಹಾಕಿರಬಹುದು ಕುರಿತು ಪೊಲೀಸರು ಶಂಕಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ಲಾವಣ್ಯ, ಗಾಂಧಿನಗರ ಠಾಣೆ ಸಿಪಿಐ ಗಾಯತ್ರಿ ಸ್ಥಳಕ್ಕೆ ಭೇಟಿ ನೀಡಿದ್ದರು.