'ಜಿಲ್ಲೆಯ ಬಳ್ಳಾರಿ, ಸಂಡೂರು ಮತ್ತು ಹೊಸಪೇಟೆ ತಾಲ್ಲೂಕುಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಜಿಂದಾಲ್ ಕೂಡ ಇದಕ್ಕೆ ಕಾರಣ ಎಂಬುದೂ ಗೊತ್ತಿದೆ. ಈ ಸನ್ನಿವೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಇರುವ ಇತರೆ ದಾರಿಗಳ ಕುರಿತೂ ಜಿಲ್ಲಾಡಳಿತ ಗಂಭೀರ ಗಮನ ಹರಿಸಿದೆ. ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರ ಪತ್ತೆ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಲಾಗಿದೆ' ಎಂದು ಹೇಳಿದರು.