ಮೇಯರ್, ಉಪ ಮೇಯರ್ ಆಯ್ಕೆ ಕುರಿತು ಚರ್ಚಿಸಲು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದರು. ರಾಜ್ಯಸಭೆ ಸದಸ್ಯ ಡಾ.ಸಯ್ಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಹಾಗೂ ವಿ.ಎಸ್.ಉಗ್ರಪ್ಪ ಭಾಗವಹಿಸಿದ್ದರು.