<p><strong>ಕೂಡ್ಲಿಗಿ:</strong> ತಾಲ್ಲೂಕಿನ ಕಾಟ್ರಹಳ್ಳಿ ಬಳಿ ನಿರ್ಮಾಣ ಮಾಡಿರುವ ಇಂಗು ಗುಂಡಿಯ ಕಾಮಗಾರಿ ತೀವ್ರ ಕಳಪೆಯಾಗಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಬಿರುಕು ಬಿಟ್ಟು, ಕುಸಿಯುವ ಹಂತ ತಲುಪಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿರುವ ಗ್ರಾಮದ ವೀರೇಶ್, ಬೆಳ್ಳಗಟ್ಟೆ ಗ್ರಾಮ ಪಂಚಾಯ್ತಿಯ 2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ನಡೆಸಿದ ಬಗ್ಗೆ ಇಂಗು ಗುಂಡಿ ಬಳಿ ಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಯಾವುದೇ ವಿವರ ಇಲ್ಲ. ಕಳಪೆ ಕಾಮಗಾರಿಯಿಂದ ಇಂಗು ಗುಂಡಿಯ ಗೋಡೆಗಳು ನೀರಿನಲ್ಲಿ ಕರಗಿ ಹೋಗುವ ರೀತಿಯಲ್ಲಿ ಬಿರುಕು ಬಿಟ್ಟಿದೆ. ಈ ಗುಂಡಿಯಲ್ಲಿ ಈಗ ನೀರು ನಿಂತಿದ್ದು, ಕುರಿ, ಜಾನುವಾರುಗಳು ನೀರು ಕುಡಿಯಲು ಹೋದರೆ ಗುಂಡಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಅವರಿಗೆ ಪೋನ್ ಮಾಡಿದರೆ, ಸ್ವಿಚ್ ಆಫ್ ಅಗಿತ್ತು.</p>.<p>ಈ ಬಗ್ಗೆ ಪ್ರತಿ ಕ್ರಿಯೆ ನೀಡಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಇಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಕಾಟ್ರಹಳ್ಳಿ ಬಳಿ ನಿರ್ಮಾಣ ಮಾಡಿರುವ ಇಂಗು ಗುಂಡಿಯ ಕಾಮಗಾರಿ ತೀವ್ರ ಕಳಪೆಯಾಗಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಬಿರುಕು ಬಿಟ್ಟು, ಕುಸಿಯುವ ಹಂತ ತಲುಪಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿರುವ ಗ್ರಾಮದ ವೀರೇಶ್, ಬೆಳ್ಳಗಟ್ಟೆ ಗ್ರಾಮ ಪಂಚಾಯ್ತಿಯ 2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ನಡೆಸಿದ ಬಗ್ಗೆ ಇಂಗು ಗುಂಡಿ ಬಳಿ ಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಯಾವುದೇ ವಿವರ ಇಲ್ಲ. ಕಳಪೆ ಕಾಮಗಾರಿಯಿಂದ ಇಂಗು ಗುಂಡಿಯ ಗೋಡೆಗಳು ನೀರಿನಲ್ಲಿ ಕರಗಿ ಹೋಗುವ ರೀತಿಯಲ್ಲಿ ಬಿರುಕು ಬಿಟ್ಟಿದೆ. ಈ ಗುಂಡಿಯಲ್ಲಿ ಈಗ ನೀರು ನಿಂತಿದ್ದು, ಕುರಿ, ಜಾನುವಾರುಗಳು ನೀರು ಕುಡಿಯಲು ಹೋದರೆ ಗುಂಡಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಅವರಿಗೆ ಪೋನ್ ಮಾಡಿದರೆ, ಸ್ವಿಚ್ ಆಫ್ ಅಗಿತ್ತು.</p>.<p>ಈ ಬಗ್ಗೆ ಪ್ರತಿ ಕ್ರಿಯೆ ನೀಡಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಇಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>