ಸಾಮಾನ್ಯವಾಗಿ ಜೂನ್ 1ಕ್ಕೆ ಐದು ದಿನ ಮುಂಚಿತವಾಗಿ ಅಥವಾ ನಂತರ ಮುಂಗಾರು ಪ್ರವೇಶವಾಗುತ್ತಿತ್ತು. ಈಗಾಗಲೇ ಬೆಂಗಳೂರು ನಗರ ಸೇರಿ
ದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಸುರಿಯುತ್ತಿದೆ. ಮೋಡ ಕಟ್ಟುವ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿರುವುದೇ ಈ ರೀತಿ ಮಳೆ ಸುರಿಯಲು ಕಾರಣ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ. ಮೇತ್ರಿ ತಿಳಿಸಿದ್ದಾರೆ.