ಹೊಸಪೇಟೆ: ನಗರದ 32ನೇ ವಾರ್ಡ್ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶನಿವಾರ ಬಿರುಸಿನ ಪ್ರಚಾರ ಕೈಗೊಂಡರು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ನೇತೃತ್ವದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಅವರನ್ನು ಬೆಂಬಲಿಸಿ, ಪುನಃ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ಮಾಧ್ಯಮ ಸಂಚಾಲಕ ಶಂಕರ್ ಮೇಟಿ, ಮುಖಂಡರಾದ ಕವಿರಾಜ ಅರಸ್, ಜಂಬಾನಹಳ್ಳಿ ವಸಂತ, ದೇವರಮನಿ ಶ್ರೀನಿವಾಸ ಇದ್ದರು.