‘ಅಕ್ರಮ ಸಂಪತ್ತಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ. ಶಿವಕುಮಾರ ಅವರು ಈಗಾಗಲೇ ಐ.ಟಿ. ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಈಗ ಜಿಂದಾಲ್ಗೆ ಭೂಮಿ ಮಾರಾಟ ಮಾಡಿ ಇನ್ನೊಂದು ಅಕ್ರಮವೆಸಗಲು ಮುಂದಾಗಿದ್ದಾರೆ. ಅಂದಹಾಗೆ, ಜಿಂದಾಲ್ ಎಂದೂ ಕನ್ನಡಿಗರ ಹಿತಕ್ಕಾಗಿ ಕೆಲಸ ನಿರ್ವಹಿಸಿಲ್ಲ. ಉನ್ನತ ಹುದ್ದೆಗಳಲ್ಲಿ ಉತ್ತರ ಭಾರತದವರನ್ನು ನೇಮಿಸಿಕೊಂಡಿದೆ. ಕೆಳಹಂತದ ಗುತ್ತಿಗೆ ಆಧಾರಿತ ನೌಕರಿಗಳಲ್ಲಿ ಸ್ಥಳೀಯರನ್ನು ನೇಮಿಸಿಕೊಂಡು ಅನ್ಯಾಯವೆಸಗಿದೆ’ ಎಂದು ಆರೋಪಿಸಿದರು.