<p><strong>ಹೊಸಪೇಟೆ:</strong> ‘ಈ ಸಲ ವಿಜಯನಗರ ಕ್ಷೇತ್ರದಲ್ಲಿ 60 ಸಾವಿರ ಜನರನ್ನು ಪಕ್ಷದ ಸದಸ್ಯತ್ವ ಕೊಡಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದುಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಗೋಂದಿ ತಿಳಿಸಿದರು.</p>.<p>ಬುಧವಾರ ನಗರದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಲೋಕಸಭೆ ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದ್ದರಿಂದ ವಿಜಯನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ 18 ಸಾವಿರ ಲೀಡ್ ಸಿಕ್ಕಿದೆ. ಸದಸ್ಯತ್ವ ಮಾಡುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಸುಲಭವಾಗಿ 60 ಸಾವಿರಕ್ಕೂ ಅಧಿಕ ಸದಸ್ಯತ್ವ ಮಾಡಬೇಕು. ಇದರಿಂದ ಪಕ್ಷ ಬಲವರ್ಧನೆಗೊಳ್ಳಲು ಸಹಾಯಕವಾಗಲಿದೆ’ ಎಂದು ಹೇಳಿದರು.</p>.<p>‘ಶ್ಯಾಮಪ್ರಸಾದ್ ಮುಖರ್ಜಿಯವರ ಜನ್ಮದಿನವಾದಜು. 6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವರು. ಅಂದಿನಿಂದ ಆ.11ರ ವರೆಗೆ ಅಭಿಯಾನ ಜರುಗಲಿದೆ. ಕಾರ್ಯಕರ್ತರು ಶ್ರಮದಾನದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು’ ಎಂದು ಸೂಚಿಸಿದರು.</p>.<p>ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ‘ವಿಜಯನಗರ ಕ್ಷೇತ್ರದಲ್ಲಿ 264 ಬೂತ್ಗಳಿವೆ. ಒಂದು ದಿನಕ್ಕೆ ಒಂದು ಬೂತ್ನಲ್ಲಿ 200 ಸದಸ್ಯರನ್ನು ಮಾಡಿದರೆ ನಾಲ್ಕು ದಿನಗಳಲ್ಲಿ 60 ಸಾವಿರದ ಗುರಿ ಮುಟ್ಟಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಸದಸ್ಯತ್ವ ಅಭಿಯಾನದ ಸಂಚಾಲಕ ರಾಮನಗೌಡ,ಮುಖಂಡರಾದ ಅಶೋಕ ಜೀರೆ, ಬಸವರಾಜ ನಾಲತ್ವಾಡ, ಗುದ್ಲಿ ಪರಶುರಾಮ, ಸಾಲಿ ಸಿದ್ದಯ್ಯ ಸ್ವಾಮಿ, ಕಟಗಿ ರಾಮಕೃಷ್ಣ, ಪಂಚಪ್ಪ, ಗಾದಿಲಿಂಗಪ್ಪ, ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಈ ಸಲ ವಿಜಯನಗರ ಕ್ಷೇತ್ರದಲ್ಲಿ 60 ಸಾವಿರ ಜನರನ್ನು ಪಕ್ಷದ ಸದಸ್ಯತ್ವ ಕೊಡಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದುಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಗೋಂದಿ ತಿಳಿಸಿದರು.</p>.<p>ಬುಧವಾರ ನಗರದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಲೋಕಸಭೆ ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದ್ದರಿಂದ ವಿಜಯನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ 18 ಸಾವಿರ ಲೀಡ್ ಸಿಕ್ಕಿದೆ. ಸದಸ್ಯತ್ವ ಮಾಡುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಸುಲಭವಾಗಿ 60 ಸಾವಿರಕ್ಕೂ ಅಧಿಕ ಸದಸ್ಯತ್ವ ಮಾಡಬೇಕು. ಇದರಿಂದ ಪಕ್ಷ ಬಲವರ್ಧನೆಗೊಳ್ಳಲು ಸಹಾಯಕವಾಗಲಿದೆ’ ಎಂದು ಹೇಳಿದರು.</p>.<p>‘ಶ್ಯಾಮಪ್ರಸಾದ್ ಮುಖರ್ಜಿಯವರ ಜನ್ಮದಿನವಾದಜು. 6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವರು. ಅಂದಿನಿಂದ ಆ.11ರ ವರೆಗೆ ಅಭಿಯಾನ ಜರುಗಲಿದೆ. ಕಾರ್ಯಕರ್ತರು ಶ್ರಮದಾನದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು’ ಎಂದು ಸೂಚಿಸಿದರು.</p>.<p>ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ‘ವಿಜಯನಗರ ಕ್ಷೇತ್ರದಲ್ಲಿ 264 ಬೂತ್ಗಳಿವೆ. ಒಂದು ದಿನಕ್ಕೆ ಒಂದು ಬೂತ್ನಲ್ಲಿ 200 ಸದಸ್ಯರನ್ನು ಮಾಡಿದರೆ ನಾಲ್ಕು ದಿನಗಳಲ್ಲಿ 60 ಸಾವಿರದ ಗುರಿ ಮುಟ್ಟಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಸದಸ್ಯತ್ವ ಅಭಿಯಾನದ ಸಂಚಾಲಕ ರಾಮನಗೌಡ,ಮುಖಂಡರಾದ ಅಶೋಕ ಜೀರೆ, ಬಸವರಾಜ ನಾಲತ್ವಾಡ, ಗುದ್ಲಿ ಪರಶುರಾಮ, ಸಾಲಿ ಸಿದ್ದಯ್ಯ ಸ್ವಾಮಿ, ಕಟಗಿ ರಾಮಕೃಷ್ಣ, ಪಂಚಪ್ಪ, ಗಾದಿಲಿಂಗಪ್ಪ, ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>