ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತನ ಸಾವು

Last Updated 23 ಮೇ 2019, 14:12 IST
ಅಕ್ಷರ ಗಾತ್ರ

ಹೊಸಪೇಟೆ: ಬಿಜೆಪಿ ವಿಜಯೋತ್ಸವದ ವೇಳೆ ಪಕ್ಷದ ಕಾರ್ಯಕರ್ತ ಗೋವಿಂದ (38) ಎಂಬುವರು ಹೃದಯಾಘಾತದಿಂದ ಗುರುವಾರ ಸಂಜೆ ತಾಲ್ಲೂಕಿನ ಕಮಲಾಪುರದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಗೆಲುವು, ಕೇಂದ್ರದಲ್ಲಿ ಪುನಃ ಪಕ್ಷ ಅಧಿಕಾರಕ್ಕೆ ಬಂದ ವಿಷಯ ತಿಳಿದು ಮಧ್ಯಾಹ್ನ ನಗರಕ್ಕೆ ಬಂದು ಪಟಾಕಿ, ಸಿಹಿ ಖರೀದಿಸಿ ಕಮಲಾಪುರಕ್ಕೆ ಮರಳಿದ್ದಾರೆ. ಸಂಜೆ ಪಕ್ಷದ ಕಾರ್ಯಕರ್ತರೊಂದಿಗೆ ವಿಜಯೋತ್ಸವ ಆಚರಿಸಿ, ಕುಣಿದು ಕುಪ್ಪಳಿಸಿದ್ದಾರೆ. ಈ ವೇಳೆ ದಣಿದವರಂತೆ ಕಂಡು ಬಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಜೀವ ಬಿಟ್ಟಿದ್ದಾರೆ. ಹೃದಯಾಘಾತದಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT