‘ಪ್ರಧಾನಿ ಅವರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದೆವು. ಆದರೆ, ಅವರ ಪರವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೋರಾಟಗಾರರ ಮನವಿ ಆಲಿಸಿದರು. ಯೋಜನೆ ಜಾರಿಯಾಗಬೇಕು ಎಂಬುದನ್ನು ಸ್ಪಷ್ಟಪಡಿಸಿದೆವು. ಜುಲೈನಲ್ಲಿ ನ್ಯಾಯಮಂಡಳಿ ಐತೀರ್ಪು ಬರುವ ನಿರೀಕ್ಷೆ ಇದ್ದು, ಅದು ಕರ್ನಾಟಕದ ಹೋರಾಟಗಾರರಿಗೆ ಸಮಾಧಾನ ನೀಡಲಿದೆ ಎಂದು ಗಡ್ಕರಿ ಹೇಳಿದರು’ ಎಂದು ಮಹಾ ವೇದಿಕೆಯ ಅಧ್ಯಕ್ಷ ಶಂಕ್ರಪ್ಪ ಅಂಬಲಿ ‘ಪ್ರಜಾವಾಣಿ’ಗೆ ತಿಳಿಸಿದರು.