ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Last Updated 15 ಸೆಪ್ಟೆಂಬರ್ 2021, 4:25 IST
ಅಕ್ಷರ ಗಾತ್ರ

ಸಿರುಗುಪ್ಪ: ತಾಲ್ಲೂಕಿನ ಬೈರಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಾಲಕನೊಬ್ಬ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಮಂಗಳವಾರ ನಡೆದಿದೆ.

ಗ್ರಾಮದ ನಿವಾಸಿ ಬಾಲಾಜಿ (13) ಮೃತ ಬಾಲಕ. ಬಾಲಾಜಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಅವಧಿಯ ನಂತರ ತಮ್ಮ ಪಾಲಕರು ಇರುವ ಜಮೀನಿಗೆ ಮಧ್ಯಾಹ್ನ ತೆರಳಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಬಾಲಕನ ಮನೆಗೆ ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ಸಿಡಿಪಿಒ ಎ.ಜಲಾಲಪ್ಪ, ತೆಕ್ಕಲಕೋಟೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿದರು. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT