ಲಂಚ ಪಡೆಯಲು ಆಯುಕ್ತೆ ತಮ್ಮ ಸರ್ಕಾರಿ ಕಾರನ್ನೇ ಬಳಸಿದ್ದಾರೆ ಎನ್ನಲಾದ ವೀಡಿಯೋ ಮತ್ತು ಆ ಬಗೆಗಿನ ಸಂಭಾಷಣೆಯ ಜೊತೆಗೆ ನವಕರ್ನಾಟಕ ಯುವಶಕ್ತಿ ಸಂಘಟನೆಯು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿತ್ತು. ಆರೋಪದ ಕುರಿತ ವಿದ್ಯಾಮಾನಗಳಿಂದ ಪಾಲಿಕೆಯ ದೈನಂದಿನ ಕೆಲಸಗಳ ಸಂದರ್ಭದಲ್ಲೂ ಮುಜುಗರ ಉಂಟಾಗುತ್ತಿರುವುದರಿಂದ ಆಯುಕ್ತೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇಲಾಖೆಗೆ ಗುರುವಾರ ವರದಿ ಸಲ್ಲಿಸಿದ್ದರು.