ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್‌.ವೈಗೆ ಬುದ್ಧಿ ಭ್ರಮಣೆಯಾಗಿದೆ: ವಿ.ಎಸ್‌. ಉಗ್ರಪ್ಪ

Last Updated 1 ಮಾರ್ಚ್ 2019, 9:40 IST
ಅಕ್ಷರ ಗಾತ್ರ

ಹೊಸಪೇಟೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತೀಯ ವಾಯುಪಡೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿರುವ ವಿಷಯವನ್ನು ಯಡಿಯೂರಪ್ಪ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಇದನ್ನು ನಾನು ಕಟುವಾಗಿ ಖಂಡಿಸುತ್ತೇನೆ’ ಎಂದರು.

‘ಯಡಿಯೂರಪ್ಪನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎಂಬುದೇ ಗೊತ್ತಿಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 150 ಮಿಷನ್‌ ಎಂದು ಹೇಳಿದ್ದರು. ಈಗ ಮಿಷನ್‌ 22 ಎನ್ನುತ್ತಿದ್ದಾರೆ. ರಾಜ್ಯ, ರಾಷ್ಟ್ರದಲ್ಲಿ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಲೆ ಇದೆ. ಅದಕ್ಕೆ ಹಲವು ಕಾರಣಗಳಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT