ಬಳ್ಳಾರಿ: ಶನಿವಾರ ಮತದಾನ ಮುಗಿದ ಬಳಿಕ ಲೋಕಸಭೆ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಗಳು ಭಾನುವಾರ ವಿಶ್ರಾಂತಿ ಪಡೆದರು.
ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಬೆಳಿಗ್ಗೆ ನಕ್ಷತ್ರ ಹೋಟೆಲ್ನಲ್ಲೇ ಉಪಾಹಾರ ಸೇವಿಸಿ, ಎಲ್ಲ ದಿನಪತ್ರಿಕೆಗಳನ್ನು ಓದಿದರು. ಕೆಲ ಕಾಲ ವಾಹಿನಿಗಳಲ್ಲಿ ಸುದ್ದಿ ವೀಕ್ಷಿಸಿದರು.
ನಂತರ ಹಡಗಲಿಗೆ ತೆರಳಿದ ಅವರು ಮಾಜಿ ಶಾಸಕ ಎಂ.ಪಿ.ರವೀಂದ್ರ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡರು. ನಂತರ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರ ಮನೆಗೆ ಭೇಟಿ ನೀಡಿ ಕೆಲ ಕಾಲ ವಿಶ್ರಾಂತಿ ಪಡೆದರು. ಸಂಜೆ ವೇಳೆಗೆ ನಗರಕ್ಕೆ ಬಂದು ವಿಶ್ರಾಂತಿ ಪಡೆದರು.
ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ನಗರದ ಬ್ಯಾಂಕ್ ಕಾಲೊನಿಯಲ್ಲಿರುವ ತಮ್ಮ ಮನೆಯಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ಮನೆ ಬಿಟ್ಟು ಹೊರಗೆ ಬರಲಿಲ್ಲ. ಅವರ ಸಹೋದರ ಶಾಸಕ ಬಿ.ಶ್ರೀರಾಮುಲು ಹಡಗಲಿಗೆ ತೆರಳಿ ರವೀಂದ್ರ ಅವರ ಅಂತಿಮ ದರ್ಶನ ಪಡೆದರು.