ಬಳಿಕ ಮಾತನಾಡಿ, ‘ದೇಶದಲ್ಲಿ ಹಲವು ಸಂಸ್ಕೃತಿ, ಭಾಷೆಗಳಿವೆ. ಆದರೆ ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಭಾಷೆ ಹೇರುತ್ತಿದೆ. ಒಂದೇ ಸಂಸ್ಕೃತಿ ಹೇರುವ ಹುನ್ನಾರ ನಡೆಸುತ್ತಿದೆ. ಪ್ರಜಾಪ್ರಭುತ್ವ ಡೋಲಾಯಮಾನ ಸ್ಥಿತಿಯಲ್ಲಿದೆ. ದಲಿತರು, ಬಡವರು, ಅಲ್ಪಸಂಖ್ಯಾತರ ಬಗ್ಗೆ ಯಾರು ಧ್ವನಿ ಎತ್ತುತ್ತಾರೋ ಅವರನ್ನು ದೇಶದ್ರೋಹಿಗಳಂತೆ ಬಿಂಬಿಸಲಾಗುತ್ತಿದೆ’ ಎಂದು ಹೇಳಿದರು.