ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಬ್ ದಾಳಿ ಪ್ರಕರಣ: ಆರೋಪಿಗಳು ಖುಲಾಸೆ

Last Updated 13 ಮಾರ್ಚ್ 2018, 10:24 IST
ಅಕ್ಷರ ಗಾತ್ರ

ಮಂಗಳೂರು: ನಗರದ ಬಲ್ಮಠದ ಅಮ್ನೇಶಿಯ ಪಬ್‌ ಮೇಲಿನ ದಾಳಿ ಪ್ರಕರಣದ 26 ಆರೋಪಿಗಳನ್ನು ಇಲ್ಲಿನ ಮೂರನೇ ಜೆಎಂಎಫ್‌ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.

2009 ರ ಜನವರಿ 24 ರಂದು ರಾತ್ರಿ ಪಾರ್ಟಿ ನಡೆಸುತ್ತಿದ್ದ ಯುವಕ, ಯುವತಿಯರ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿ
ದ್ದರು. ಈ ಕುರಿತು ಪ್ರಮೋದ್ ಮುತಾಲಿಕ್ ಸೇರಿದಂತೆ 40ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು 30 ಜನರ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ವಿಚಾರಣೆಯ ಸಮಯದಲ್ಲಿ ಇನ್ನಿಬ್ಬರು ವಿದೇಶಕ್ಕೆ ತೆರಳಿದ್ದರು. ಹಾಗಾಗಿ ಉಳಿದ 26 ಜನರ ವಿರುದ್ಧ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.

ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಧೀಶ ಮಂಜುನಾಥ್ ಆದೇಶ ನೀಡಿದರು.

ಆದೇಶದ ಪ್ರಕಟಣೆಯ ವೇಳೆ ಹಾಜರಿದ್ದ ಪ್ರಮೋದ್ ಮುತಾಲಿಕ್, ‘ಇದು ಸತ್ಯಕ್ಕೆ ಸಂದ ಜಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT