ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ‘ನಾಗಡಿಕೆರೆ– ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಪ್ರೇಮಕುಮಾರ ಹರಿಯಬ್ಬೆ ಭಾಜನರಾಗಿದ್ದಾರೆ.
₹ 10,000 ನಗದು, ಫಲಕವನ್ನು ಪ್ರಶಸ್ತಿ ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆ ಪ್ರೇಮಕುಮಾರ ಹರಿಯಬ್ಬೆ ಅವರನ್ನು ಆಯ್ಕೆ ಮಾಡಿದೆ ಎಂದು ಕಸಾಪ ತಿಳಿಸಿದೆ.