ಕಾಂಗ್ರೆಸ್:ಕಾಂಗ್ರೆಸ್ ಪಕ್ಷದ ಮುಖಂಡರು ನಗರದ ಏಳು ಕೇರಿಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ, ಎ.ಐ.ಸಿ.ಸಿ. ಕಾರ್ಯದರ್ಶಿ ಡಾ.ಸಾಕೆ ಶೈಲಜನಾಥ್, ಶಾಸಕರಾದ ಜೆ.ಎನ್. ಗಣೇಶ್, ಭೀಮಾ ನಾಯ್ಕ, ಈ. ತುಕಾರಾಂ, ಪಕ್ಷದ ಜಿಲ್ಲಾ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಮುಖಂಡರಾದ ವಿ.ಎಸ್. ಉಗ್ರಪ್ಪ, ಜೆ.ಎಸ್. ಆಂಜನೇಯಲು, ತಾರಿಹಳ್ಳಿ ವೆಂಕಟೇಶ್, ಗುಜ್ಜಲ್ ನಾಗರಾಜ್, ನಿಂಬಗಲ್ ರಾಮಕೃಷ್ಣ, ಪತ್ರೇಶ್ ಹಿರೇಮಠ, ಎಂ.ಬಿ. ಪಾಟೀಲ, ಡಿ. ವೆಂಕಟರಮಣ, ಲಿಯಾಕತ್ ಅಲಿ, ಗುಡಿಗುಂಟಿ ಮಲ್ಲಿಕಾರ್ಜುನ ಅವರಿಗೆ ಸಾಥ್ ನೀಡಿದರು.