ಕಾನಹೊಸಹಳ್ಳಿ: ಸಮೀಪದ ಎಂ.ಬಿ.ಅಯ್ಯನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ದಾಟುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಮೃತಪಟ್ಟಿದ್ದಾರೆ.
ಎಂ.ಬಿ.ಅಯ್ಯನಹಳ್ಳಿಯ ಶಿವಪ್ರಸಾದ್ (52) ಮೃತ, ಎಕ್ಸ್ ಎಲ್ ಬೈಕ್ ನಲ್ಲಿ ಹೆದ್ದಾರಿ ದಾಟುವ ಸಂದರ್ಭದಲ್ಲಿ ಹೊಸಪೇಟೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಸ್ಥಳೀಯರು ಕೆಲ ಕಾಲ ಹೆದ್ದಾರಿ ತಡೆದು ಅಂಡರ್ ಪಾಸ್, ನಿರ್ಮಿಸುವಂತೆ ಒತ್ತಾಯಿಸಿ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಕೆಲವೊತ್ತು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಸ್ಥಳಕ್ಕೆ ತಹಶೀಲ್ದಾರ್ ಜಗದೀಶ, ಡಿಎಸ್ಪಿ ಹರೀಶ್ ರೆಡ್ಡಿ, ಕೊಟ್ಟೂರು ಸಿಪಿಐ ಸೋಮಶೇಖರ ಕೆಂಚರೆಡ್ಡಿ ಭೇಟಿ ನೀಡಿ ಪ್ರತಿಭಟನ ಕಾರರನ್ನು ಮನವೊಲಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.