ಎತ್ತು ಹಾಗೂ ಚಕ್ಕಡಿಯನ್ನು ವಿಶೇಷ ರೀತಿಯಲ್ಲಿ ಅಲಂಕರಿಸಿ, ಅದಕ್ಕೆ ಪೂಜೆ ನೆರವೇರಿಸಿ ಮೆರವಣಿಗೆ ಮಾಡಿದರು. ಇಲ್ಲಿನ ಎತ್ತಿನ ಬಂಡಿ ಯುವಕರ ಸಂಘವು ಸೋಮವಾರ ಸಂಜೆ ನಗರದಲ್ಲಿ ಎತ್ತಿನ ಬಂಡಿ ಓಡಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಎ.ಪಿ.ಎಂ.ಸಿ.ಯಿಂದ ಆರಂಭಗೊಂಡ ಮೆರವಣಿಗೆಯು ವಾಲ್ಮೀಕಿ ವೃತ್ತ, ಏಳುಕೇರಿಗಳ ಮೂಲಕ ಹಾದು ಮಾರುಕಟ್ಟೆ ಬಳಿ ಕೊನೆಗೊಂಡಿತು.