ನಾನು ನಿವೇಶನ ಖರೀದಿಸಲು ಓಡಾಡುತ್ತಿರುವಾಗ 2000ನೇ ಇಸ್ವಿಯಲ್ಲಿ ಎಲ್. ಭಾಗ್ಯ ಮತ್ತು ಡಿ. ವೇಣುಗೋಪಾಲ್ ಎಂಬುವರು ಶಿರಸಿನಕಲ್ಲು ಪ್ರದೇಶದಲ್ಲಿ ತಮ್ಮ ಹೆಸರಿನಲ್ಲಿ ನಿವೇಶನ ಇರುವುದಾಗಿ ತಿಳಿಸಿ, ತೋರಿಸಿದರು. ಸ್ನೇಹಿತರೊಂದಿಗೆ ಹೋಗಿ ಖರೀದಿಗೆ ಸಮ್ಮತಿ ಸೂಚಿಸಿ, ₹16 ಲಕ್ಷಕ್ಕೆ ಖರೀದಿಸಲು ಮಾತುಕತೆ ಅಂತಿಮಗೊಳಿಸಿ, ಅದೇ ದಿನ ಭಾಗ್ಯ ಅವರ ಹೆಸರಿನ ಖಾತೆಗೆ ₹2 ಲಕ್ಷ ಹಾಕಿದೆ. 2021ರ ಜುಲೈ 17ರ ವರೆಗೆ ಹಂತ ಹಂತವಾಗಿ ಭಾಗ್ಯ ಅವರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಿದೆ ಎಂದು ಸಂತೋಷ್ ದೂರಿನಲ್ಲಿ ತಿಳಿಸಿದ್ದಾರೆ.