ಕೃಷ್ಣ ಮಠ:ಜಂಬುನಾಥ ರಸ್ತೆಯ ಕೃಷ್ಣ ನಗರದ ಕೃಷ್ಣ ಮಠದಲ್ಲಿ ಕೃಷ್ಣನಿಗೆ ಲಕ್ಷ ತುಳಸಿ, ಪುಷ್ಪಾರ್ಚನೆ ಮಾಡಲಾಯಿತು. ನಂತರ ಭಜನೆ ಕಾರ್ಯಕ್ರಮ ನಡೆಯಿತು. ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನ ದರ್ಶನ ಪಡೆದರು. ಹಬ್ಬದ ನಿಮಿತ್ತ ಇಡೀ ದೇಗುಲಕ್ಕೆ ವಿದ್ಯುದ್ದೀಪಲಂಕಾರ ಹಾಗೂ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.