ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

Last Updated 13 ಏಪ್ರಿಲ್ 2019, 13:00 IST
ಅಕ್ಷರ ಗಾತ್ರ

ಹೊಸಪೇಟೆ: ಶ್ರೀರಾಮ ನವಮಿ ಪ್ರಯುಕ್ತ ರಾಮ ಮಾಲಾಧಾರಿಗಳು ಶನಿವಾರ ತಾಲ್ಲೂಕಿನ ಕಮಲಾಪುರದಲ್ಲಿ ಸಂಕೀರ್ತನಾ ಯಾತ್ರೆ ಕೈಗೊಂಡರು.

ಹಿಂದೂ ಜಾಗರಣ ವೇದಿಕೆಯಿಂದ ಆಯೋಜಿಸಿದ್ದ ಆರನೇ ವರ್ಷದ ಕಾರ್ಯಕ್ರಮದಲ್ಲಿ ಪಟ್ಟಣದ ಅನೇಕ ಯುವಕರು ಶ್ರೀರಾಮ ಮಾಲಾಧಾರಣೆ ಮಾಡಿ, ರಾಮನ ಸ್ತುತಿಸುತ್ತ ನಗರದ ಪ್ರಮುಖ ಮಾರ್ಗಗಳಲ್ಲಿ ಹೆಜ್ಜೆ ಹಾಕಿದರು.

ಇದಕ್ಕೂ ಮುನ್ನ ಮಾಲ್ಯವಂತ ರಘುನಾಥ ದೇಗುಲದಲ್ಲಿ ಶ್ರೀರಾಮ ತಾರಕ ಹೋಮ, ಸೀತಾರಾಮ ಕಲ್ಯಾಣ ಕಾರ್ಯಕ್ರಮ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ನಂತರ ಮಡಿ ತೇರು ನಡೆಯಿತು. ಬಳಿಕ ಮಾಲಾಧಾರಿಗಳು ಮಾಲೆಯನ್ನು ವಿಸರ್ಜಿಸಿದರು.

ವೇದಿಕೆಯಪ್ರಾಂತ ಸಂಘಟನಾ ಕಾರ್ಯದರ್ಶಿ ಸು.ಕೃಷ್ಣಮೂರ್ತಿ, ಪ್ರಾಂತ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಡಿಗೇರ್, ಮುಖಂಡರಾದ ಮೌನೇಶ್ ಬಡಿಗೇರ್, ಮಣಿಕಂಠ, ವಿರೇಶ್, ಗಿರೀಶ್, ಕುಮಾರ,ನವೀನ್ ಕುಮಾರ್, ಸಿದ್ದೇಶ್ ಪೂಜಾರ, ಗಣೇಶ್ ನೀರ್ಲಿಗಿ, ಬಳಿಗೇರ್ ರಾಮಣ್ಣ, ಲಕ್ಷ್ಮೀಶ, ಮಾಂತೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT