ಬೆಳಗಾವಿ: ‘ಕರ್ನಾಟಕದವರು ಮಹಾರಾಷ್ಟ್ರದ ಒಂದು ಬಸ್ಸಿಗೆ ಬೆಂಕಿ ಹಚ್ಚಿದರೆ ಮಹಾರಾಷ್ಟ್ರಕ್ಕೆ ಬರುವ ಕರ್ನಾಟಕದ 10 ಬಸ್ಸುಗಳಿಗೆ ನಾವು ಬೆಂಕಿ ಹಚ್ಚುತ್ತೇವೆ’ ಎಂದು ಹೇಳಿಕೆ ನೀಡಿದ್ದ ರಾಜ್ಯಸಭಾ ಸದಸ್ಯ, ಶಿವಸೇನೆಯ ಮುಖಂಡ ಸಂಜಯ ರಾವುತ್ ವಿರುದ್ಧ ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸಂಜೆ ಪ್ರಕರಣ ದಾಖಲಾಗಿದೆ.