ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಇಲಾಖೆ ನೌಕರನ ಪತ್ನಿಗೆ ಪರಿಹಾರ

Last Updated 10 ಏಪ್ರಿಲ್ 2019, 15:53 IST
ಅಕ್ಷರ ಗಾತ್ರ

ಹೊಸಪೇಟೆ: ಇತ್ತೀಚೆಗೆ ಅನಾರೋಗ್ಯದಿಂದ ಮೃತರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೂಡ್ಲಿಗಿ ಘಟಕದ ಸಹಾಯಕ ಕುಶಲ ಕರ್ಮಿ ಎಚ್‌. ಚಂದ್ರಶೇಖರ್‌ ಅವರ ಪತ್ನಿ ವಿಜಯಮಾಲಾ ಅವರಿಗೆ ಸಂಸ್ಥೆಯಿಂದ ಬುಧವಾರ ₹3 ಲಕ್ಷ ಪರಿಹಾರದ ಚೆಕ್‌ ವಿತರಿಸಲಾಯಿತು.

ಸಂಸ್ಥೆಯ ಸಿಬ್ಬಂದಿ ಮೃತರಾದಲ್ಲಿ ಅವರ ಅವಲಂಬಿತರಿಗೆ ಸಂಸ್ಥೆಯು ಆಂತರಿಕ ಗುಂಪು ವಿಮೆ ಯೋಜನೆಯ ಅಡಿಯಲ್ಲಿ ಪರಿಹಾರ ವಿತರಿಸುತ್ತದೆ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಹಾಗೂ ಕಾರ್ಮಿಕ ಕಲ್ಯಾಣ ಅಧಿಕಾರಿ ಎ. ಸಂಜೀವಮೂರ್ತಿ ಅವರು ವಿಜಯಮಾಲಾ ಅವರಿಗೆ ಪರಿಹಾರದ ಚೆಕ್‌ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT