‘ಎಲ್ಲೆಲ್ಲಿ ಚಿರತೆಗಳ ಓಡಾಟ ಹೆಚ್ಚಿದೆಯೋ ಅಂಥ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಪ್ ಕ್ಯಾಮೆರಾ ಅಳವಡಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಅಂಜನಾದ್ರಿ, ಹಂಪಿ ಸುತ್ತಮುತ್ತ ಹೆಚ್ಚಾಗಿ ಬೆಟ್ಟ, ಗುಡ್ಡಗಳಿರುವುದರಿಂದ ಚಿರತೆಗಳು ಸುಲಭವಾಗಿ ಅವಿತುಕೊಳ್ಳುತ್ತವೆ. ಅವುಗಳನ್ನು ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ತಜ್ಞರೊಂದಿಗೆ ಸಮಾಲೋಚಿಸಿ ಅವುಗಳ ದಾಳಿ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.