<p><strong>ಕಂಪ್ಲಿ (ಬಳ್ಳಾರಿ ಜಿಲ್ಲೆ) :</strong> ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಭಾನುವಾರ ತಡೆದಿದೆ.</p>.<p>58 ವರ್ಷದ ವ್ಯಕ್ತಿಯೊಂದಿಗೆ ಹಸೆಮಣೆ ಏರಬೇಕಿದ್ದ ಅಪ್ರಾಪ್ತೆಯನ್ನು ಅಧಿಕಾರಿಗಳು ರಕ್ಷಿಸಿ ಬಾಲ್ಯವಿವಾಹ ಕಾಯ್ದೆಯಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>‘ಪ್ರಾಥಮಿಕ ಮಾಹಿತಿ ಪ್ರಕಾರ ವರನಿಗೆ ಇದು ಮೂರನೇ ವಿವಾಹ’ ಎಂದು ತಿಳಿದು ಬಂದಿರುವುದಾಗಿ ತಹಶೀಲ್ದಾರ್ ಗೌಸಿಯಾಬೇಗಂ ಮಾಹಿತಿ ನೀಡಿದರು.</p>.<p>‘ವರ, ಅಪ್ರಾಪ್ತೆಯ ತಂದೆ–ತಾಯಿ, ಮಧ್ಯಸ್ಥಿಕೆ ವಹಿಸಿದ್ದ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್ಐ ವಿರುಪಾಕ್ಷಪ್ಪ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಂಪ್ಲಿ (ಬಳ್ಳಾರಿ ಜಿಲ್ಲೆ) :</strong> ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಭಾನುವಾರ ತಡೆದಿದೆ.</p>.<p>58 ವರ್ಷದ ವ್ಯಕ್ತಿಯೊಂದಿಗೆ ಹಸೆಮಣೆ ಏರಬೇಕಿದ್ದ ಅಪ್ರಾಪ್ತೆಯನ್ನು ಅಧಿಕಾರಿಗಳು ರಕ್ಷಿಸಿ ಬಾಲ್ಯವಿವಾಹ ಕಾಯ್ದೆಯಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>‘ಪ್ರಾಥಮಿಕ ಮಾಹಿತಿ ಪ್ರಕಾರ ವರನಿಗೆ ಇದು ಮೂರನೇ ವಿವಾಹ’ ಎಂದು ತಿಳಿದು ಬಂದಿರುವುದಾಗಿ ತಹಶೀಲ್ದಾರ್ ಗೌಸಿಯಾಬೇಗಂ ಮಾಹಿತಿ ನೀಡಿದರು.</p>.<p>‘ವರ, ಅಪ್ರಾಪ್ತೆಯ ತಂದೆ–ತಾಯಿ, ಮಧ್ಯಸ್ಥಿಕೆ ವಹಿಸಿದ್ದ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪಿಎಸ್ಐ ವಿರುಪಾಕ್ಷಪ್ಪ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>