ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಚೆಲ್ಲಬಾರದು. ಕೇವಲ ಪುರಸಭೆ, ಗ್ರಾಮ ಪಂಚಾಯ್ತಿ ಸಿಬ್ಬಂದಿಗೆ ಮಾತ್ರ ಸ್ವಚ್ಛತೆಯ ಹೊಣೆಗಾರಿಕೆ ಇಲ್ಲ, ಪ್ರತಿಯೊಬ್ಬರೂ ಗ್ರಾಮ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡಬೇಕು ಎಂದು ತಿಳಿಸಿದರು. ಪಟ್ಟಣದಲ್ಲಿ ಕೆಲವರು ಸರ್ಕಾರಿ ನಿವೇಶನವನ್ನು ಅತಿಕ್ರಮಣ ಮಾಡಿದ್ದಾರೆ, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅದನ್ನು ಸರ್ವೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೇ ಬಸ್ ನಿಲ್ದಾಣದ ಬಳಿ ಅಂಗಡಿ ಮಾಲೀಕರು ಎಲ್ಲೆಂದರಲ್ಲಿ ಕಸ ಹಾಕಿರುವುದಕ್ಕೆ ದಂಡ ವಿಧಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿದರು. ಮಾಲೀಕರಿಂದಲೇ ಕಸವನ್ನು ಸ್ವಚ್ಛಗೊಳಿಸಿದರು. ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪ ಪೂಜೇರಿ, ವ್ಯವಸ್ಥಾಪಕ ಮಲ್ಲನಗೌಡ, ಪುರಸಭೆ ಮುಖ್ಯಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಇದ್ದರು.