ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಚ್ಛ ಪರಿಸರ; ಎಲ್ಲರ ಸಹಕಾರ ಅಗತ್ಯ’

ಹಗರಿಬೊಮ್ಮನಹಳ್ಳಿ: ಅತಿಕ್ರಮಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ
Last Updated 31 ಜನವರಿ 2021, 3:14 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಪಟ್ಟಣವನ್ನು ಸ್ವಚ್ಛವಾಗಿಡಲು ಸಮುದಾಯದ ಸಹಕಾರವೂ ಅಗತ್ಯ ಎಂದು ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಹೇಳಿದರು.

ಪಟ್ಟಣದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಹುತಾತ್ಮ ದಿನಾಚರಣೆ ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿವಿಧ ವಾರ್ಡ್‍ಗಳಲ್ಲಿ ಸ್ವಚ್ಛತೆ ಕೈಗೊಂಡು ಅವರು ಮಾತನಾಡಿದರು.

ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಚೆಲ್ಲಬಾರದು. ಕೇವಲ ಪುರಸಭೆ, ಗ್ರಾಮ ಪಂಚಾಯ್ತಿ ಸಿಬ್ಬಂದಿಗೆ ಮಾತ್ರ ಸ್ವಚ್ಛತೆಯ ಹೊಣೆಗಾರಿಕೆ ಇಲ್ಲ, ಪ್ರತಿಯೊಬ್ಬರೂ ಗ್ರಾಮ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡಬೇಕು ಎಂದು ತಿಳಿಸಿದರು. ಪಟ್ಟಣದಲ್ಲಿ ಕೆಲವರು ಸರ್ಕಾರಿ ನಿವೇಶನವನ್ನು ಅತಿಕ್ರಮಣ ಮಾಡಿದ್ದಾರೆ, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅದನ್ನು ಸರ್ವೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೇ ಬಸ್ ನಿಲ್ದಾಣದ ಬಳಿ ಅಂಗಡಿ ಮಾಲೀಕರು ಎಲ್ಲೆಂದರಲ್ಲಿ ಕಸ ಹಾಕಿರುವುದಕ್ಕೆ ದಂಡ ವಿಧಿಸಿದರು. ಕೆಲವರಿಗೆ ಎಚ್ಚರಿಕೆ ನೀಡಿದರು. ಮಾಲೀಕರಿಂದಲೇ ಕಸವನ್ನು ಸ್ವಚ್ಛಗೊಳಿಸಿದರು. ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಹಾಲಸಿದ್ದಪ್ಪ ಪೂಜೇರಿ, ವ್ಯವಸ್ಥಾಪಕ ಮಲ್ಲನಗೌಡ, ಪುರಸಭೆ ಮುಖ್ಯಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಇದ್ದರು.

ಇದೇ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯ್ತಿ , ಬಿಆರ್‌ಸಿ ಕಚೇರಿ, ಬೋವಿ ಕಾಲೋನಿ, ಹಳೇ ಬಸ್ ನಿಲ್ದಾಣದಲ್ಲಿ ಸ್ವಚ್ಛಗೊಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT