ಸಂಜೆ ನಗರದ ಉಕ್ಕಡಕೇರಿ, ಚಿತ್ರಕೇರಿ, ಬಾಣದಕೇರಿಯಲ್ಲಿ ಸಂಚರಿಸಿ ಮತಯಾಚಿಸಿದರು. ಬಾಣದಕೇರಿಯಲ್ಲಿ ಮಾತನಾಡಿ, ‘ಬಿಜೆಪಿ ಸರ್ಕಾರ ಇದ್ದಾಗಲೆಲ್ಲ ವಾಲ್ಮೀಕಿ ನಾಯಕರಿಗೆ ಬಹಳಷ್ಟು ಅನುಕೂಲಗಳಾಗಿವೆ. ಸರ್ಕಾರ ಸ್ಥಿರವಾಗಿ ಇದ್ದರೆ ಸಮಾಜದ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದು. ಅದಕ್ಕಾಗಿ ನಾನು, ಶ್ರೀರಾಮುಲು ಸೇರಿದಂತೆ ಸಮಾಜದ ಇತರೆ ಶಾಸಕರು ಶ್ರಮಿಸುತ್ತೇವೆ’ ಎಂದು ಭರವಸೆ ನೀಡಿದರು.