ಉಪಾಧ್ಯಕ್ಷ ಎಲ್.ಎಸ್. ಆನಂದ್ ಮಾತನಾಡಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ನಡೆಸಲಾಗುವ ರಾಷ್ಟ್ರ/ರಾಜ್ಯ ಮಟ್ಟದ ಕ್ರೀಡೆ, ಕಲೆ, ಭಾಷಣ ಹಾಗೂ ಇತರೆ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯ ಗಳಿಸಿದವರಿಗೆ ಆಯಾ ವರ್ಷ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅದಕ್ಕೆ ಈ ವರ್ಷ ಕಡಿಮೆ ಅರ್ಜಿಗಳು ಬಂದಿವೆ. ಏಕೆ ಹೀಗಾಗಿದೆ ಎನ್ನುವುದು ಪರಿಶೀಲಿಸಬೇಕಿದೆ ಎಂದರು.