ನಗರದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ಆವರಣದಲ್ಲಿ ಟೀಂ ಮೋದಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸೂಲಿಬೆಲೆ, ‘ರಾಹುಲ್ ಗಾಂಧಿಯನ್ನುಕೊಲ್ಲಬೇಕು ಅಂತ ಬಯಸುವ ಪುಣ್ಯಾತ್ಮ ಅದು ಯಾರಿದ್ದಾನಪ್ಪ ಅವರನ್ನು ಹುಡುಕಿಕೊಂಡು ಅವಾರ್ಡ್ ಕೊಡಬೇಕು ಎಂದು ಹೇಳಿದ್ದರು. ಈ ಹೇಳಿಕೆಯು ಹೀನಕೃತ್ಯಕ್ಕೆ ಕುಮ್ಮಕ್ಕು ನೀಡುವಂಥದ್ದು ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ’ ಎಂದು ತಿಳಿಸಿದರು.