ಎರಡೂ ಪಕ್ಷಗಳ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ನಡೆಸಿದರು. ನಂತರ ರೋಟರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ವಿಜಯೋತ್ಸವ ಆಚರಿಸಿದರು. ‘ಉಗ್ರಪ್ಪನವರಿಗೆ ಜಯವಾಗಲಿ’, ‘ಸಿದ್ದರಾಮಯ್ಯನವರಿಗೆ ಜಯವಾಗಲಿ’, ‘ದೋಸ್ತಿ ಸರ್ಕಾರಕ್ಕೆ ಜಯವಾಗಲಿ’ ಎಂದು ಘೋಷಣೆಗಳನ್ನು ಕೂಗಿದರು.