ಇದಕ್ಕೂ ಮುನ್ನ ಶಾಸಕರಾದ ಯು.ಟಿ. ಖಾದರ್, ಈ. ತುಕಾರಾಂ, ಪರಮೇಶ್ವರ ನಾಯ್ಕ, ಭೀಮಾ ನಾಯ್ಕ ಜಾಥಾಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ, ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಇಮಾಮ್ ನಿಯಾಜಿ, ವಿ. ಸೋಮಪ್ಪ, ಮುಖಂಡರಾದ ವೆಂಕಟರಾವ ಘೋರ್ಪಡೆ, ದೀಪಕ್ ಸಿಂಗ್, ಗುಜ್ಜಲ್ ರಘು, ಗುಜ್ಜಲ್ ನಾಗರಾಜ್, ಹಾಲಪ್ಪ, ಭರತ್, ಅಕ್ಕಿ ತೋಟೇಶ್, ಬಡಾವಲಿ, ಗೌಸ್, ವೀಣಾ ಮಹಾಂತೇಶ, ಆಶಾಲತಾ, ಮುನ್ನಿ ಭಾಗವಹಿಸಿದ್ದರು.