<p><strong>ಹೊಸಪೇಟೆ: </strong>ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಯುವತಿಯ ಅತ್ಯಾಚಾರ, ಕೊಲೆ ಘಟನೆಯ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಇಲ್ಲಿನ ರೋಟರಿ ವೃತ್ತದ ಧ್ವಜಸ್ತಂಭ ಕಟ್ಟೆಯಲ್ಲಿ ನಡೆಸಿದ ಪ್ರತಿಭಟನೆಯ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಸಂಜೆ ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿದರು.</p>.<p>ಬಳಿಕ ಹೂವಿನಿಂದ ಅಲಂಕರಿಸಿ, ಕುಂಬಳಕಾಯಿ ಒಡೆದು, ದೀಪ ಬೆಳಗಿದರು. ‘ಕಾಂಗ್ರೆಸ್ ಪ್ರತಿಭಟನೆ ವೇಳೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಧ್ವಜಸ್ತಂಭದ ಕಟ್ಟೆಯ ಮೇಲೆ ನಿಂತು ಮಾತನಾಡಿ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಅದು ಖಂಡನಾರ್ಹ’ ಎಂದು ಸಚಿವ ಆನಂದ್ ಸಿಂಗ್ ಅವರ ಅಳಿಯ, ಬಿಜೆಪಿ ಯುವ ಮುಖಂಡ ಸಂದೀಪ್ ಸಿಂಗ್ ತಿಳಿಸಿದ್ದಾರೆ.</p>.<p>‘ಧ್ವಜಸ್ತಂಭ ಕಟ್ಟೆಯ ಸುತ್ತಲೂ ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕದೇವಿ, ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್. ಅಂಬೇಡ್ಕರ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂದೇಶಗಳನ್ನು ಒಳಗೊಂಡ ಕೆತ್ತನೆ ಇದೆ. ಅದರ ಮೇಲೆ ನಿಂತು ಅಗೌರವ ತೋರಿರುವುದು ಅಕ್ಷಮ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಆಗಬಾರದು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಯುವತಿಯ ಅತ್ಯಾಚಾರ, ಕೊಲೆ ಘಟನೆಯ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಇಲ್ಲಿನ ರೋಟರಿ ವೃತ್ತದ ಧ್ವಜಸ್ತಂಭ ಕಟ್ಟೆಯಲ್ಲಿ ನಡೆಸಿದ ಪ್ರತಿಭಟನೆಯ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಸಂಜೆ ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿದರು.</p>.<p>ಬಳಿಕ ಹೂವಿನಿಂದ ಅಲಂಕರಿಸಿ, ಕುಂಬಳಕಾಯಿ ಒಡೆದು, ದೀಪ ಬೆಳಗಿದರು. ‘ಕಾಂಗ್ರೆಸ್ ಪ್ರತಿಭಟನೆ ವೇಳೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಧ್ವಜಸ್ತಂಭದ ಕಟ್ಟೆಯ ಮೇಲೆ ನಿಂತು ಮಾತನಾಡಿ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಅದು ಖಂಡನಾರ್ಹ’ ಎಂದು ಸಚಿವ ಆನಂದ್ ಸಿಂಗ್ ಅವರ ಅಳಿಯ, ಬಿಜೆಪಿ ಯುವ ಮುಖಂಡ ಸಂದೀಪ್ ಸಿಂಗ್ ತಿಳಿಸಿದ್ದಾರೆ.</p>.<p>‘ಧ್ವಜಸ್ತಂಭ ಕಟ್ಟೆಯ ಸುತ್ತಲೂ ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕದೇವಿ, ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್. ಅಂಬೇಡ್ಕರ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂದೇಶಗಳನ್ನು ಒಳಗೊಂಡ ಕೆತ್ತನೆ ಇದೆ. ಅದರ ಮೇಲೆ ನಿಂತು ಅಗೌರವ ತೋರಿರುವುದು ಅಕ್ಷಮ್ಯ. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಆಗಬಾರದು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>