ಮಂಗಳವಾರ ಸಂಜೆ ಇಲ್ಲಿ ಹಮ್ಮಿಕೊಂಡಿದ್ದ ಮತದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬಿಜೆಪಿ ಅಧಿಕಾರದಲ್ಲಿದ್ದಾಗ ಮೂವರು ಮುಖ್ಯಮಂತ್ರಿಗಳಾಗಿದ್ದರು. ಸ್ವತಃ ಬಿ. ಶ್ರೀರಾಮುಲು ಅವರು ಸಚಿವರಾಗಿದ್ದರು. ಗಣಿ ಸಂಪತ್ತು ಲೂಟಿ ಹೊಡೆದದ್ದು ಬಿಟ್ಟರೆ ಬೇರೇನೂ ಮಾಡಿರಲಿಲ್ಲ. ಅಕ್ರಮ ಗಣಿಗಾರಿಕೆಯಿಂದ ರಾಷ್ಟ್ರಮಟ್ಟದಲ್ಲಿ ಬಳ್ಳಾರಿಗೆ ಕೆಟ್ಟ ಹೆಸರು ಬಂದಿತ್ತು. ನಾನು ಮುಖ್ಯಮಂತ್ರಿ ಆದ ನಂತರ ಜಿಲ್ಲೆಗೆ ಒಳ್ಳೆಯ ಹೆಸರು ತರುವಂತಹ ಕೆಲಸ ಮಾಡಿದೆ’ ಎಂದರು.