‘ನಮ್ಮೂರಿಗೆ ಜಿಲ್ಲಾಧಿಕಾರಿ ಭೇಟಿ ನೀಡುತ್ತಿರುವುದು ಸಂತಸದ ವಿಷಯ. ಸಿ.ಸಿ. ರಸ್ತೆ ನಿರ್ಮಾಣ ವಿಚಾರದಲ್ಲಿ ನಮ್ಮೂರು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಮೊರಾರ್ಜಿ ವಸತಿ ಶಾಲೆಗೆ ಹೋಗುವ ರಸ್ತೆ, ಗ್ರಾಮದಲ್ಲಿನ ರಸ್ತೆಗಳು ಮಳೆಗಾಲದಲ್ಲಿ ಕೆಸರು ಗದ್ದೆಗಳಾಗುತ್ತವೆ. ಶಾಲಾ ಕಾಂಪೌಂಡ್, ರಸ್ತೆಗಳ ಅಭಿವೃದ್ಧಿಗೆ ಅವರು ಕ್ರಮ ಕೈಗೊಳ್ಳಬೇಕು’ ಎಂದು ಹರಪನಹಳ್ಳಿ ನಾಗರಾಜ, ಎಚ್.ಚಂದ್ರಪ್ಪ ಆಗ್ರಹಿಸಿದ್ದಾರೆ.