ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘2015ರಿಂದ ಸತತ ಎರಡು ವರ್ಷ ಈ ರೈಲು ಮೇಲ್ಕಂಡ ಮಾರ್ಗಗಳ ಮೂಲಕ ಸಂಚರಿಸಿತ್ತು. ಬಳಿಕ ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಅನೇಕ ಸಲ ಸಂಬಂಧಿಸಿದ ಅಧಿಕಾರಿಗಳು, ಸಚಿವರಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ಪೀಯೂಷ್ ಗೋಯೆಲ್, ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ನಿಯಮಿತವಾಗಿ ರೈಲು ಓಡಿಸುವ ಭರವಸೆ ಕೊಟ್ಟಿದ್ದಾರೆ. ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಎಲ್ಲ ಸಚಿವರಿಗೂ ಕೃತಜ್ಞತೆ ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.